ಕನ್ನಡ ಕಾವ್ಯಪ್ರಯೋಗ
ನುಡಿಯೊಳಗೆ ಸಲುವುದು ನಾಡಿನಾ ರೂಪಕ. ನಾಡಿನ ಆದರ್ಶ, ಕಾಣ್ಕೆ, ಸಾಂಸ್ಕøತಿಕ ಚರಿತ್ರೆ ನುಡಿಯೊಳಗೆ ಒಡಮೂಡಿದೆ. ಶಾಸನಪದ್ಯಗಳಿಂದ ಹಿಡಿದು ಇದುವರೆಗಿನ ಕಾವ್ಯ ಕಥನಗಳ ಆಯ್ದ ಬರಹಗಳ ತುಣುಕನ್ನು ಸಂಬಂಧಗಳ ಪರಿಕಲ್ಪನೆಯಾಧಾರದಲ್ಲಿ ಹೆಣೆದು ಇಲ್ಲಿ ರಂಗರೂಪಕವಾಗಿಸಲಾಗಿದೆ. ಕನ್ನಡದ ಲೋಕಗೃಹಿಕೆ, ಕನ್ನಡದ ವಿವೇಕ ಇವನ್ನು ಇಂದಿನ ಯುವಕರಿಗಾಗಿ ಮರುನಿರೂಪಿಸುವ ಒಂದು ಪ್ರಯತ್ನ ಇದು. ಸಮುದಾಯದ ನಟ ನಟಿಯರು ಈ ಕಾವ್ಯಗಳನ್ನು ಆಡುತ್ತಾರೆ, ಹಾಡುತ್ತಾರೆ, ಕೆಲವನ್ನು ಅಭಿನಯಿಸುತ್ತಾರೆ. ಒಂದೂವರೆ ಗಂಟೆ ಕಾಲ ಸುಮಾರು 31 ಸಾಹಿತ್ಯಿಕ ಬರಹವನ್ನು ಇಲ್ಲಿ ರಂಗಕ್ಕೆ ತರಲಾಗಿದೆ. ಸಾಹಿತ್ಯ ಕಥನಗಳ ರಂಗ ಓದು ಇದು. ವಿದ್ಯಾರ್ಥಿಗಳಿಗೂ, ಅದ್ಯಾಪಕರಿಗೂ ಅನುಕೂಲವಾಗುವುದೆಂಬ ಶೈಕ್ಷಣಿಕ ಉದ್ದೇಶವೂ, ಯುವಕರ ದನಿ ಇಂದು ಕರ್ಕಶವಾಗುತ್ತಿರುವ ಹೊತ್ತಿನಲ್ಲಿ ಅವರ ದೇಹಕ್ಕೆ ಕಾವ್ಯದ ಸಾಹಚರ್ಯ ಒದಗಿಸುವ ಸಾಮಾಜಿಕ ಉದ್ದೇಶವೂ ಸಮುದಾಯದ ಈ ರಂಗ ಪ್ರಸ್ತುತಿಯ ಹಿಂದಿದೆ.
ರಂಗ ಪಠ್ಯ: ಡಾ.ಎಂ.ಜಿ.ಹೆಗಡೆ; ವಿನ್ಯಾಸ:ದಾಮೋದರ ನಾಯ್ಕ, ಹೊನ್ನಾವರ; ನಿರ್ದೇಶನ: ಡಾ.ಶ್ರೀಪಾದ ಭಟ್; ಸಹನಿರ್ದೆಶನ: ಯತೀಶ್ ಕೊಳ್ಳೇಗಾಲ ಮತ್ತು ಲಕ್ಷ್ಮಣ ಪಿ;
ವಿಡಿಯೋಗಾಗಿ ಕ್ಲಿಕ್ ಮಾಡಿ
ಕಾವ್ಯರಂಗ
No comments:
Post a Comment